SL Bhyrappa: ಎಸ್‌ಎಲ್‌ ಭೈರಪ್ಪ ನಿಧನ : ಇಂದು ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರಿನಲ್ಲಿ ಅಂತಿಮ ದರ್ಶನ

ನಿನ್ನೆ ವಿಧಿವಶರಾದ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ (94) (SL Bhyrappa) ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಮಾಡಲಾಗಿದೆ. ಸಾರ್ವಜನಿಕರು, ಅಭಿಮಾನಿಗಳು ಈ ಸಂದರ್ಭದಲ್ಲಿ ಅವರ ದರ್ಶನ ಪಡೆಯಬಹುದು.

ಮಧ್ಯಾಹ್ನ 2 ಗಂಟೆಯ ಬಳಿಕ ಶರೀರವನ್ನು ಮೈಸೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಮೈಸೂರಿನ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ನಂತರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ನಾಳೆ ಮೈಸೂರಿನಲ್ಲಿ  ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ

ಎಸ್​ಎಲ್​​ ಭೈರಪ್ಪನವರು ಹಾಸನ ಜಿಲ್ಲೆಯಲ್ಲೇ ಹುಟ್ಟಿದ್ರೂ.. ತಮ್ಮ ವಿಶ್ರಾಂತ ಜೀವನವನ್ನು ಮೈಸೂರಿನಲ್ಲಿ ಕಳೆಯುತ್ತಿದ್ದರು. ಹೀಗಾಗಿ ಮೈಸೂರಿನಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಭೈರಪ್ಪನ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ವಿದೇಶದಲ್ಲಿರುವ ಭೈರಪ್ಪನವರ ಮಗ, ನಾಳೆ ಮುಂಜಾನೆ ಮೈಸೂರಿಗೆ ಆಗಮಿಸಲಿದ್ದು, ಚಾಮುಂಡಿ ತಪ್ಪಲಿನಲ್ಲಿರೋ ಹರಿಶ್ಚಂದ್ರ ಘಾಟ್​ನಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ.  

Rakesh arundi

Leave a Reply

Your email address will not be published. Required fields are marked *