D K Shivakumar: ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್
ಕಾಂಗ್ರೆಸ್ ನಲ್ಲಿ ಮತ್ತೆ ಅಧಿಕಾರ ಹಂಚಿಕೆ ಚರ್ಚೆ ಮುನ್ನಲೆಗೆ ಬಂದಿದೆ. ನವೆಂಬರ್ ಕ್ರಾಂತಿಯ ಮಾತು ಜೋರಾಗಿದೆ. ಈಗಾಗಲೇ ಕೆಲ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾಂಗ್ರೆಸ್ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯಾರಿಗೂಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರು ಸಹ ಮಾತನಾಡಬಾರದು. ಅವರಿಗೆ ನೋಟಿಸ್ ಕೊಡಲು ಹೇಳಿದ್ದೇನೆ ಎಂದರು.
ಯಾರಿಗೂ ಅಧಿಕಾರ ಹಂಚಿಕೆಯ ಬಗ್ಗೆ ಮಾತನಾಡುವ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರೂ ಸಹ ಮಾತನಾಡಬಾರದು. ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ಎಲ್ಲಿ ಇದೆ? ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಯಾರು ಚರ್ಚೆ ಮಾಡಬಾರದು. ಇದರ ಬಗ್ಗೆ ಮಾತನಾಡುವವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ನನ್ನ ಪರವಾಗಿ ಮಾತಾಡಿದರೂ ಅದು ಡ್ಯಾಮೇಜ್ ಆಗುತ್ತೆ. ಇದರ ಬಗ್ಗೆ ಚರ್ಚೆ ಮಾಡಿದರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದಂತೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರು ಏನು ಹೇಳಿದ್ದಾರೋ ಅಷ್ಟೇ, ಅವರು ಹೇಳಿದಂತೆ ಹೈಕಮಾಂಡ್ ಮಾತೇ ಅಂತಿಮ. ಹೈಕಮಾಂಡ್ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ನಮಗೆ ಪಕ್ಷ ಮುಖ್ಯ, ವ್ಯಕ್ತಿಯಲ್ಲ. ಪಕ್ಷ ಹೇಳಿದಂತೆ ಕೇಳಿಕೊಂಡು ಹೋಗುತ್ತೇವೆ ಅಂತ ಹೇಳಿದ್ದಾರೆ. ನೀವು ಹೇಳಿದ್ದು ನಮ್ಮ ಬಾಯಲ್ಲಿ ಹೇಳಿಸುವುದಕ್ಕೆ ಹೋಗಬೇಡಿ, ನಾನು ಮೂರ್ಖನಲ್ಲ ಎಂದಿದ್ದಾರೆ.
ಬಿಜೆಪಿ ಪಕ್ಷದವರು ಅವರ ಪಾರ್ಟಿಯ ಕ್ರಾಂತಿಯ ಬಗ್ಗೆ ಚರ್ಚೆ ಮಾಡಿಕೊಂಡು ಹೋಗಲಿ. ನಾನು ಸೂಜಿ, ದಾರ ಬೇಕಾದರೆ ಕಳಿಸಿಕೊಡುತ್ತೇನೆ ಅವರು ಹೊಲೆದುಕೊಂಡು ಅವರ ಪಕ್ಷವನ್ನು ರೆಡಿ ಮಾಡಿಕೊಳ್ಳಲಿ ಎಂದು ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದ್ದಾರೆ.