Bengaluru: ಬೃಹತ್ ಮರ ಬಿದ್ದು ಯುವತಿ ಸ್ಥಳದಲ್ಲೇ ಸಾವು

ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ.

ಸೋಲದೇವನಹಳ್ಳಿಯಲ್ಲಿ ಬೈಕ್​ನಲ್ಲಿ ಸ್ನೇಹಿತೆ ಜೊತೆ ಹೋಗುತ್ತಿದ್ದಾಗ ಮರ ಮುರಿದು ಬಿದ್ದಿದೆ. ಮರದ ಬಿದ್ದ ಹೊಡೆತಕ್ಕೆ ಕೀರ್ತನಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು, ಆಕೆಯ ಜೊತೆಗಿದ್ದ ಸ್ನೇಹಿತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ರಾತ್ರಿ 7 ಗಂಟೆಯ ಸುಮಾರಿಗೆ ದುರಂತ ಸಂಭವಿಸಿದೆ. ಯುವತಿಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿದ್ದು , ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Rakesh arundi

Leave a Reply

Your email address will not be published. Required fields are marked *