Bengaluru: ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ: ಆರೋಪಿ ಡಾ. ಮಹೇಂದ್ರ್ಗೆ 14 ದಿನಗಳ ನ್ಯಾಯಾಂಗ ಬಂಧನ..!
ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಪತಿ ಮಹೇಂದ್ರ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ಹೊರಡಿಸಿದೆ.
ವೈದ್ಯೆ ಪತ್ನಿ ಕೃತಿಕಾಗೆ ಅನಾಸ್ತೇಷಿಯಾ ನೀಡಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಾ.ಮಹೇಂದ್ರ ಅವರನ್ನು ಬೆಂಗಳೂರಿನ 29ನೇ ಎಸಿಎಂಎಂ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದರು.
ನ್ಯಾಯಾಧೀಶರು ಆರೋಪಿಯ ವಿರುದ್ಧದ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಹೀಗಾಗಿ ಹತ್ಯೆಗೈದ ಪತಿ ಡಾ.ಮಹೇಂದ್ರ ಜೈಲುಪಾಲಾಗಿದ್ದಾರೆ.