Mysuru: ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ: ಪ್ರದೀಪ್​ ಈಶ್ವರ್

ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ವಾಕ್ ಸಮರ ಜೋರಾಗಿ ನಡೆದಿದೆ. ಇಬ್ಬರು ಪರಸ್ಪರ ಏಕವಚನದಲ್ಲೇ ಟೀಕೆ ಮಾಡಿಕೊಂಡಿದ್ದು, ಪ್ರತಾಪ್​ ಸಿಂಹ ಮಾತಿಗೆ ಪ್ರದೀಪ್​ ಈಶ್ವರ್​ ತಿರುಗೇಟು ನೀಡಿದ್ದಾರೆ.

ಎಷ್ಟು ಜನ ಗೌಡರ ಮಕ್ಕಳಿಗೆ ನೀನು ನೆರವಾಗಿದ್ದೀಯಾ? ನನ್ನ ಕ್ಷೇತ್ರದಲ್ಲಿ ನಾನು 2,500 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇನೆ. ನಾನು ಕತ್ತಲಲ್ಲಿ ಕಾಣಲ್ವಂತೆ. ಅಯೋಗ್ಯ, ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ. ಆತನಿಗೆ 50-50 ಬಿಸ್ಕತ್ ಫೆವರೇಟ್​ ಎಂದು ಪ್ರದೀಪ್​ ಈಶ್ವರ್​ ವ್ಯಂಗ್ಯವಾಡಿದ್ದಾರೆ.

Rakesh arundi

Leave a Reply

Your email address will not be published. Required fields are marked *