Caste Census: ಜಾತಿಗಣತಿ ಗಣತಿಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ವಿಸ್ತರಣೆ
ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರೀಕ್ಷೆಯಂತೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ದಸರಾ ರಜೆ ಅವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ.
ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ.
ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಶಿಕ್ಷಕರು ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಶಾಲೆಗಳಲ್ಲಿ ಪಾಠ ಭೋಧನೆಯಲ್ಲಿ ಪಾಲ್ಗೊಳ್ಳುವುದರಿಂದ ಯಾವುದಕ್ಕೂ ನ್ಯಾಯ ನೀಡಲು ಆಗುವುದಿಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲು ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.